- Advertisement -
- Advertisement -
ಉಡುಪಿ: ಯುವಕನೊಬ್ಬ ಕಳ್ಳತನಕ್ಕೆ ದೇವಸ್ಥಾನಕ್ಕೆ ನುಗ್ಗಿ ಬಳಿಕ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿ ಮುಟ್ಟಿ ಅಪವಿತ್ರ ಗೊಳಿಸಿದ ಘಟನೆ ಮರವಂತೆಯ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಒಳ ನುಗ್ಗಿದ ಯುವಕ ವರಾಹ ವಿಷ್ಣು ನಾರಸಿಂಹ ದೇವರ ಮೂರ್ತಿ ಮುಟ್ಟಿ ಅಪವಿತ್ರಗೊಳಿಸಿದ್ದಾನೆ. ಬಳಿಕ ಏನು ಸಿಗದೆ ಬರಿಗೈಯಲ್ಲಿ ವಾಪಸ್ ಆಗಿದ್ದಾನೆ. ಕಳ್ಳನ ಮುಖ ಚಹರೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -