Wednesday, May 15, 2024
Homeಕರಾವಳಿಬೆಳ್ತಂಗಡಿ : ಕೊಕ್ಕಡದ ಮಾಯಿಲಕೋಟೆ ದೇವಸ್ಥಾನಕ್ಕೆ ನುಗ್ಗಿದ ಕಳ್ಳ;  ಕಳ್ಳನನ್ನು ಹಿಡಿದು ಕಳ್ಳತನ ಮಾಡಿದ್ದ ಸಾಮಾಗ್ರಿ...

ಬೆಳ್ತಂಗಡಿ : ಕೊಕ್ಕಡದ ಮಾಯಿಲಕೋಟೆ ದೇವಸ್ಥಾನಕ್ಕೆ ನುಗ್ಗಿದ ಕಳ್ಳ;  ಕಳ್ಳನನ್ನು ಹಿಡಿದು ಕಳ್ಳತನ ಮಾಡಿದ್ದ ಸಾಮಾಗ್ರಿ ವಾಪಸ್ ಪಡೆದ ಸ್ಥಳೀಯರು

spot_img
- Advertisement -
- Advertisement -

ಬೆಳ್ತಂಗಡಿ : ಕೊಕ್ಕಡ ಗ್ರಾಮದ ಮಾಯಿಲಕೋಟೆ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಸಿಕ್ಕಿಹಾಕಿಕೊಂಡ ಘಟನೆ ನ.10ರಂದು ನಡೆದಿದೆ.

ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ಮಾಡಿದವರ ಬಗ್ಗೆ ಒಂದು ತಿಂಗಳೊಳಗೆ ಸುಳಿವು ಸಿಗುವಂತೆ ದೇವಸ್ಥಾನದಲ್ಲಿ ಪ್ರಾರ್ಥಿಸಲಾಗಿತ್ತು. ಅಂತೆಯೇ ದೇವರ ಕಾರ್ಣಿಕದಿಂದ ಒಂದು ತಿಂಗಳೊಳಗೆ ಕಳ್ಳರು ಪತ್ತೆಯಾಗಿದ್ದಾರೆ.

ನ.10 ರಂದು ಮಧ್ಯಾಹ್ನದ ಸಮಯ ಕಳ್ಳರು ಕಳ್ಳತನ ಮಾಡುತ್ತಿದ್ದ ಸಂದರ್ಭದಲ್ಲಿ ದೊಡ್ಡದಾದ ಶಬ್ದವೊಂದು ಕೇಳಿಸಿದ್ದು ಪರಿಸರದ ಜನರೆಲ್ಲ ಒಟ್ಟಾಗಿ ದೇವಸ್ಥಾನದ ಬಳಿ ತೆರಳಿದಾಗ ಕಳ್ಳ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಎನ್ನಲಾಗಿದೆ. ತಕ್ಷಣ ಸ್ಥಳೀಯರ ಸಹಕಾರದಿಂದ ಕಳ್ಳನನ್ನು ಹಿಡಿದು ಕಳ್ಳತನ ಮಾಡಿದ್ದ ಸಾಮಾಗ್ರಿಗಳನ್ನು ಪಡೆದುಕೊಂಡು ನಂತರ ಬುದ್ದಿ ಹೇಳಿ ಕಳ್ಳನನ್ನು ದೂರು ನೀಡದೆ ಬಿಟ್ಟಿದ್ದಾರೆ.

- Advertisement -
spot_img

Latest News

error: Content is protected !!