Sunday, April 28, 2024
Homeತಾಜಾ ಸುದ್ದಿಇಂದು ಸಾರಿಗೆ ನೌಕರರ  ಪ್ರತಿಭಟನೆ; ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ ಎಂದು ಸಾರಿಗೆ ಇಲಾಖೆಯಿಂದ ಸ್ಪಷ್ಟನೆ

ಇಂದು ಸಾರಿಗೆ ನೌಕರರ  ಪ್ರತಿಭಟನೆ; ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ ಎಂದು ಸಾರಿಗೆ ಇಲಾಖೆಯಿಂದ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇಂದು ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆದರೆ ಇದರಿಂದ  ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಸಾರಿಗೆ ನೌಕರರು ಈಗಾಗಲೇ ಪ್ರತಿಭಟನೆಗೆ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು. ಆದರೆ ಇಂದು  ಕೆಎಸ್‌ಆರ್ಟಿಸಿ ಬಿಎಂಟಿಸಿ ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿದೆ ಆದರೆ, ಈ ಸಂಬಂಧ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ . ಕೆ ಎಸ್ ಆರ್ ಟಿ ಸಿ ವ್ಯಾಪ್ತಿಯಲ್ಲಿ ಇಂದು ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!