- Advertisement -
- Advertisement -
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುತ್ತಿರುವುದು ಖಚಿತವಾಗುತ್ತಿರುವಂತೆ ಅವ್ರಿಗೆ ಪ್ರಬಲ ಪೈಪೋಟಿ ಕೊಡಲು ಬಿಜೆಪಿ ಸಜ್ಜಾಗಿದೆ. ಅಲ್ಲದೇ ವರುಣಾದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಸ್ಪರ್ಧೆಗಿಳಿಯುತ್ತಾರೆ ಎನ್ನಲಾಗಿತ್ತು. ಇದೀಗ ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಯಡಿಯೂರಪ್ಪ, ವರುಣಾದಿಂದ ವಿಜಯೇಂದ್ರ ಯಾವುದೇ ಕಾರಣಕ್ಕೂ ಸ್ಪರ್ಧಿಸೋದಿಲ್ಲ. ಅವರು ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕೆಂದು ನಾನು ಹೇಳಿದ್ದೇನೆ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
- Advertisement -