Sunday, June 29, 2025
Homeತಾಜಾ ಸುದ್ದಿಶಾಲೆಗಳಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್...

ಶಾಲೆಗಳಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದಂತ ಶಿಕ್ಷಣ ಇಲಾಖೆಗೆ ಈದ್ ಮಿಲಾದ್ ಆಚರಣೆಗೂ ಅವಕಾಶ ನೀಡುವಂತೆ ಮುಸ್ಲೀಂ ಮುಖಂಡರು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಶಾಲೆಗಳಲ್ಲಿ ವಿನಾಯಕನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ. ಸರಸ್ವತಿ ಪೂಜೆ, ಗಣೇಶ ಪ್ರತಿಷ್ಠಾಪನೆ ನಡೆಯುತ್ತಿದೆ. ಮುಂದೆಯೂ ಸರಸ್ವತಿ ಪೂಜೆ, ಗಣೇಶ ಪ್ರತಿಷ್ಠಾಪನೆ ನಡೆಯಲಿದೆ ಎಂದರು.

ಶಾಲೆಗಳಲ್ಲಿ ಈ ಪದ್ಧತಿಯು ಬಾಲಗಂಗಾಧರ ತಿಲಕ್ ಕಾಲದಿಂದಲೂ ಇದೆ. ಆದರೇ ಯಾವುದೇ ನಮಾಜ್, ಕೃಷ್ಣ ಪೂಜೆ, ಅಯ್ಯಪ್ಪ ಪೂಜೆ, ಕ್ರೈಸ್ತರ ಪ್ರಾರ್ಥನೆಗೆ ಶಾಲೆಗಳಲ್ಲಿ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

- Advertisement -
spot_img

Latest News

error: Content is protected !!