- Advertisement -
- Advertisement -
ಸುಳ್ಯ: ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ಅಂಗಡಿ ಮತ್ತೊ ಹೋಟೆಲ್ ವೊಂದಕ್ಕೆ ಕಳ್ಳರುಬೀಗ ಮುರಿದು ಒಳ ನುಗ್ಗಿದ ಘಟನೆ ವರದಿಯಾಗಿದೆ.
ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅಲ್ಲೆ ಹಿಂಬದಿಯಲ್ಲಿರುವ ಮೋಹನ ಅವರ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ.
ಈ ಘಟನೆಯು ಮಂಗಳವಾರದಂದು ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಬೆಳಕಿಗೆ ಬಂದಿದೆ.
ಕಳ್ಳತನ ಪ್ರಕರಣಗಳು ಇತ್ತೀಚೆಗೆ ಕನಕಮಜಲ್ಲಿ ಹೆಚ್ಚಾಗುತ್ತಿದ್ದು, ಅವರನ್ನು ಮಟ್ಟ ಹಾಕಲು ಸಂಬಂಧಪಟ್ಟ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯ ಜನರು ದೂರಿದ್ದಾರೆ.
- Advertisement -