- Advertisement -
- Advertisement -
ಮಂಗಳೂರಿನಲ್ಲಿ ಕಳ್ಳತನ ಮಾಡಿ ಕದ್ದೊಯ್ದಿದ್ದ ಕಾರನ್ನು ಕಳ್ಳರು ಮುಲ್ಕಿಯಲ್ಲಿ ಬಿಟ್ಟು ಹೋದ ಘಟನೆ ನಡೆದಿದೆ.ಮಂಗಳೂರಿನ ಉರ್ವಸ್ಟೋರ್ ಸಮೀಪದ ಕೋಟೆಕಣಿ ಒಂದನೇ ಕ್ರಾಸ್ ನಲ್ಲಿ ಮನೆಯೊಂದಕ್ಕೆ ಇಂದು ನಸುಕಿನ ಜಾವ ಕಳ್ಳರು ನುಗ್ಗಿದ್ದಾರೆ. ಈ ವೇಳೆ ಮನೆ ಮಂದಿ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು, ಬಳಿಕ ಅದೇ ಮನೆಯ ಕಾರನ್ನೂ ಕದ್ದೊಯ್ದಿದ್ದರು. ಅದೇ ಕಾರಿನಲ್ಲಿ ಮುಲ್ಕಿಯ ವರೆಗೆ ಬಂದ ಕಳ್ಳರು ಇಲ್ಲಿನ ಆಧಿದನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ .
ಅಪರಿಚಿತ ಕಾರೊಂದು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಪತ್ತೆಯಾದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರಿಂದದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸಿವೆ ಎನ್ನಲಾಗಿದೆ.
- Advertisement -