ಕಡಬ: ಕಾರಿನಲ್ಲಿ ಬಂದ ಮಹಿಳೆಯೊಬ್ಬರ ಸರ ಕದ್ದು ಪರಾರಿಯಾಗುತ್ತಿರುವ ವೇಳೆ ಕಾರು ಅಪಘಾತವಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಇಂದು ನಡೆದಿದೆ.
ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸರವನ್ನು ಕಿತ್ತುಕೊಂಡು ಕಾರಿನಲ್ಲಿ ಬಂದ ಇಬ್ಬರು ಪರಾರಿಯಾಗಿದ್ದರು.ತಕ್ಷಣ ಮಹಿಳೆ ಕಿರುಚಿಕೊಂಡಾಗ ಸ್ಥಳದಲ್ಲಿದ್ದ ಜನರು ಕಳ್ಳರನ್ನು ಬೆನ್ನಟ್ಟಿದರು. ಆಗ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದ್ದರಿಂದ ಇಬ್ಬರು ಅಪಘಾತಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸರ ಕದ್ದು ಕಳ್ಳರು ಪರಾರಿಯಾಗುತ್ತಿದ್ದಂತೆ ತಕ್ಷಣ ಮಹಿಳೆ ಕಿರುಚಿಕೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ಕಳ್ಳರನ್ನು ಬೆನ್ನಟ್ಟಿದ್ದಾರೆ. ಆಗ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದ್ದರಿಂದ ಇಬ್ಬರು ಅಪಘಾತಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಇಬ್ಬರು ಕೂಡ ಕಳ್ಳತನಕ್ಕಾಗಿಯೇ ಕಾಸರಗೋಡಿನಿಂದ ಬಂದಿದ್ದರು ಎಂದು ತಿಳಿದು ಬಂದಿದೆ.