Monday, June 30, 2025
Homeತಾಜಾ ಸುದ್ದಿಸಂವಿಧಾನದ ಆಶಯಗಳಲ್ಲಿ ನಂಬಿಕೆ ಮತ್ತು ಬದ್ಧತೆ ಇಲ್ಲದವರು ದೇಶದ್ರೋಹಿಗಳು: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಲ್ಲಿ ನಂಬಿಕೆ ಮತ್ತು ಬದ್ಧತೆ ಇಲ್ಲದವರು ದೇಶದ್ರೋಹಿಗಳು: ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ವಿಧಾನಸಭಾ ಚುನಾವಣೆಯು 2023ರ ಏಪ್ರಿಲ್- ಮೇ ಯಲ್ಲಿ ನಡೆಯಲಿದ್ದು, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದೇ ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆಯನ್ನು ಗೆಲ್ಲುವುದಲ್ಲ, ಬದಲಾಗಿ ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಕರೆ ನೀಡಿದ್ದಾರೆ.

ಅವರು ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿ,  ಕರ್ನಾಟಕದಲ್ಲಿ 2023ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡಯಲಿದೆ. 2024ಕ್ಕೆ ಲೋಕಸಭಾ ಚುನಾವಣೆಯೂ ಇದೆ. ಇವುಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್‍ಗಳಿಗೆ, ಮಹಾನಗರ ಪಾಲಿಕೆ ಚುನಾವಣೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನವ ಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ. ಪಕ್ಷ ಬೂತ್ ಮಟ್ಟದಿಂದ ಕೆಪಿಸಿಸಿ ಮಟ್ಟದ ವರೆಗೆ ಸಂಘಟಿತಗೊಂಡರೆ ಚುನಾವಣೆಗಳ ಗೆಲುವು ಕಷ್ಟದ ಕೆಲಸವಲ್ಲ. ಇಂತಹ ಹಲವು ಚುನಾವಣೆಗಳನ್ನು ಯಶಸ್ವಿಯಾಗಿ ಪಕ್ಷ ಈಗಾಗಲೇ ಎದುರಿಸಿದೆ ಎಂದರು. 

ಇನ್ನು ಬಿಜೆಪಿ ಕುರಿತು, ಬಿಜೆಪಿ ಪಕ್ಷವು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ. ಇವುಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ ಎಂದರು. 


ನಾವು ಅಧಿಕಾರಕ್ಕೆ ಬರುವಾಗ ರಾಜ್ಯದ ಜಿಡಿಪಿ 6 ಲಕ್ಷ ಕೋಟಿ ರೂಪಾಯಿಗೆ ಇತ್ತು, ನಾವು ಅಧಿಕಾರದಿಂದ ಇಳಿಯುವಾಗ 14 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. 2020-21ರಲ್ಲಿ -5% ಬೆಳವಣಿಗೆ ಕಂಡಿದ್ದು, ಇದು ರಾಜ್ಯವನ್ನು ಸಾಲದ ಸುಳಿಗೆ ಸಿಕ್ಕಿಸಿ, ಆರ್ಥಿಕವಾಗಿ ದಿವಾಳಿ ಮಾಡಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದರು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ, ಸಿಮೆಂಟ್ ಹೀಗೆ ಎಲ್ಲದರ ಬೆಲೆ ಗಗನಕ್ಕೇರಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತಪ್ಪು ಆರ್ಥಿಕ ನೀತಿ ಮತ್ತು ಅದನ್ನು ರಾಜ್ಯ ಸರ್ಕಾರ ಅನುಸರಿಸುತ್ತಿರುವುದು ಎಂದು ಕಿಡಿಕಾರಿದರು.

ಇನ್ನು ಅನಗತ್ಯವಾಗಿ ಪಠ್ಯ ಪರಿಷ್ಕರಣೆಗೊಳಪಡಿಸಿ ಪಠ್ಯವನ್ನು ಕೇಸರೀಕರಣ ಮಾಡಲಾಗುತ್ತಿದ್ದು, ಆರ್.ಎಸ್.ಎಸ್ ಮೂಲದ ಯಾರೋ ರೋಹಿತ್ ಚಕ್ರತೀರ್ಥ ಎಂಬವನನ್ನು ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಪಠ್ಯದಲ್ಲಿ ಭಗತ್ ಸಿಂಗ್, ನಾರಾಯಣ ಗುರು, ಕುವೆಂಪು ಇಂಥವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ 10 ಮಂದಿ ಸಾಹಿತಿಗಳು ಪಠ್ಯ ಕ್ರಮದಿಂದ ತಮ್ಮ ಸಾಹಿತ್ಯಗಳನ್ನು ತೆಗೆದುಹಾಕಿ ಎಂದು ಹೇಳಿದ್ದಾರೆ. ಜನರ ಈ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೋರಾಟಗಳನ್ನು ರೂಪಿಸಬೇಕಾಗುತ್ತದೆ. ಇದಕ್ಕೆ ಪಕ್ಷ ಮಾಡಿರುವ ಆರು ಕಮಿಟಿಗಳ ಸದಸ್ಯರು ತಮ್ಮ ಸಲಹೆ ನೀಡಬೇಕು. ನಾವೆಲ್ಲರೂ ಒಂದು ಗೂಡಿ ಈ ದಿಸೆಯಲ್ಲಿ ಹೋರಾಟ ನಡೆಸಬೇಕಾಗಿದೆ ಎಂದರು. 

- Advertisement -
spot_img

Latest News

error: Content is protected !!