Tuesday, April 30, 2024
Homeಅಪರಾಧಕಂದಾಯ ಅಧಿಕಾರಿ ಮೇಲೆ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿ ಲಂಚಕ್ಕೆ ಬೇಡಿಕೆ

ಕಂದಾಯ ಅಧಿಕಾರಿ ಮೇಲೆ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡಿ ಲಂಚಕ್ಕೆ ಬೇಡಿಕೆ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಕಂದಾಯ ಅಧಿಕಾರಿಯೊಬ್ಬರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಘಟನೆಯ ವಿವರ: ‘ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಚಾರ ತಂಡದಲ್ಲಿ (ಫ್ಲೈಯಿಂಗ್‌ ಸ್ಕ್ವ್ಯಾಡ್) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಏ. 5ರಂದು  ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆ ವರೆಗೆ ಚುನಾವಣಾ ಪ್ಲೈಯಿಂಗ್ ತಂಡ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿದ್ದು, ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅಂದು ಸುಮಾರು ಮಧ್ಯಾಹ್ನ  1.09ರ ಸಮಯಕ್ಕೆ ವಾಟ್ಸ್‌ಆ್ಯಪ್‌ ಬಳಸಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ.  ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಪೋನ್ ಕೊಟ್ಟಿದ್ದರು. ಆ ವ್ಯಕ್ತಿಯು  ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಸರಿ ಮಾಡುವುದಾದರೆ ಮಾಡುವ’ ಎಂದು ಹೇಳಿ ಮೊದಲು ಮಾತನಾಡಡಿದ್ದ ವ್ಯಕ್ತಿಗೆ ಪೋನ್ ಕೊಟ್ಟಿದ್ದರು. ಅಲ್ಲದೇ ₹ 80 ಸಾವಿರವನ್ನು ಪೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು.’

ಈ ಕುರಿತಂತೆ ಪ್ರತಿಕ್ರಯಿಸಿದ ಕಂದಾಯ ಅಧಿಕಾರಿ, ‘ತನಗೆ  9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದಿದ್ದು, ₹ 50 ಸಾವಿರವನ್ನಾದರೂ ಪೋನ್ ಪೇ ಮೂಲಕ ಕಳುಹಿಸಬೇಕು ಎಂದು ಮತ್ತೆ ಆ ವ್ಯಕ್ತಿ ತಿಳಿಸಿದ್ದಾರೆ. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಇನ್ನು ಪುರುಷೋತ್ತಮ ಅವರು ಕರೆ ಬಂದ ಮೊಬೈಲ್‌ ನಂಬರ್ ಟ್ರೂ ಕಾಲರ್ ಆ್ಯಪ್‌ನಲ್ಲಿ ಪರಿಶೀಲಿಸಿದಾಗ ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಈ ಬಗ್ಗೆ  ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ವಿಚಾರಿಸಿದ್ದು. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದರು.’

‘ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯ ಕಚೇರಿಯ  ಹಿರಿಯ ಆರೋಗ್ಯ ನಿರೀಕ್ಷಕರಾದ ಲಿಲ್ಲಿ ನಾಯರ್ ಮತ್ತು  ಕೃಷ್ಣ ಆರ್ ಅವರಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಮೋಸದಿಂದ ಹಣ ಪಡೆದು ವಂಚಿಸುವ ದುರುದ್ದೇಶದಿಂದ ತಮಗೆ ಹಾಗೂ ತಮ್ಮ ಕಚೇರಿ ಸಿಬ್ಬಂದಿಗೆ ಈ ರೀತಿ ಕರೆ ಮಾಡಲಾಗಿದೆ ಎಂದು ಪುರುಷೋತ್ತಮ ಅವರು ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!