- Advertisement -
- Advertisement -
ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಗೆ ಕೊಲೆ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಮುತಾಲಿಕ್, ನಿನ್ನೆ ರಾತ್ರಿ 4 ನಂಬರ್ಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ 4 ಬೇರೆ ಬೇರೆ ನಂಬರುಗಳಿಂದ ಬೆದರಿಕೆ ಕರೆಗಳು ಬಂದಿವೆ. ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಬೆದರಿಕೆ ಕರೆ ಬಂದಿದೆ. ಕೊಚ್ಚಿ ಕೊಲೆ ಮಾಡ್ತೀವಿ ಎಂದು ಬೆದರಿಕೆ ಹಾಕಿದ್ದಾರೆ. ಇಂದು ಬೆಳಗ್ಗೆಯೂ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಕೊಲೆ ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ.
- Advertisement -