Thursday, April 25, 2024
Homeಕರಾವಳಿಆಶಾ ಕಾರ್ಯಕರ್ತೆಗೆ ಬೆದರಿಕೆ, ಎಸ್‌ಡಿಪಿಐ ಕಾರ್ಯಕರ್ತರಿಬ್ಬರ ಬಂಧನ

ಆಶಾ ಕಾರ್ಯಕರ್ತೆಗೆ ಬೆದರಿಕೆ, ಎಸ್‌ಡಿಪಿಐ ಕಾರ್ಯಕರ್ತರಿಬ್ಬರ ಬಂಧನ

spot_img
- Advertisement -
- Advertisement -

ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಂಗಳೂರು ನಗರದ ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಸ್ಮಾಯಿಲ್‌ (45) ಮತ್ತು ಅಶ್ರಫ್‌ (32) ಬಂಧಿತರು. ವಸಂತಿ ಎಂಬ ಆಶಾ ಕಾರ್ಯಕರ್ತೆ ಶನಿವಾರ ಮನೆ ಭೇಟಿಗೆ ತೆರಳಿದ್ದ ವೇಳೆ ಇಬ್ಬರೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಕರ್ತವ್ಯ ನಿರ್ವಹಿಸದಂತೆ ತಡೆದಿದ್ದ ಆರೋಪಿಗಳು, ಆಶಾ ಕಾರ್ಯಕರ್ತೆಗೆ ಬೆದರಿಕೆಯನ್ನೂ ಹಾಕಿದ್ದರು ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ.

ವಸಂತಿ ಅವರು ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸರ್ಕಾರಿ ಇಲಾಖೆಯ ನಿಯೋಜಿತ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!