Tuesday, May 7, 2024
Homeಕರಾವಳಿಮಂಗಳೂರು:ಬಸ್ ನಿಂದ ಇಳಿಸಿ ಪ್ರಯಾಣಿಕನಿಗೆ ಹಲ್ಲೆ ನಡೆಸಿದ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರು:ಬಸ್ ನಿಂದ ಇಳಿಸಿ ಪ್ರಯಾಣಿಕನಿಗೆ ಹಲ್ಲೆ ನಡೆಸಿದ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಯುವತಿಯ ಬ್ಯಾಗ್ ಹಿಡಿದುಕೊಂಡಿದ್ದಕ್ಕೆ ಪ್ರಯಾಣಿಕನನ್ನು ಬಸ್ ನಿಂದ ಇಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಮನೋಹರ್, ಚೇತನ್, ಕಿಶೋರ್ ಎಂದು ಬಂಧಿತ ಆರೋಪಿಗಳು. ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಕಲಂಗಳಡಿಯಲ್ಲಿ ಕೇಸ್ ದಾಖಲಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಲ್ಲರಪಟ್ನ ನಿವಾಸಿ 45 ವರ್ಷದ ಇಸ್ಹಾಕ್ ಎಂಬವರಿಗೆ ಬಸ್ ಕಂಡೆಕ್ಟರ್ ಪಿತೂರಿಯಿಂದ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಯಿ ಎಂಬಲ್ಲಿ ನಿನ್ನೆ ನಡೆದಿತ್ತು .

ಬಿಸಿರೋಡಿನಲ್ಲಿ ವಾಸವಿರುವ ಇಸ್ಹಾಕ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಬಿ.ಸಿ.ರೋಡ್ ನಿಂದ ಮೂಡಬಿದಿರೆಗೆ ತೆರಳಲೆಂದು ಖಾಸಗಿ ಬಸ್ ಹತ್ತಿದ್ದರು. ಬಸ್ಸಿನಲ್ಲಿ ಪ್ರಯಾಣಿಕರ ದಟ್ಟಣೆಯಿದ್ದರಿಂದ ಇಸ್ಹಾಕ್ ಕುಳಿತಿದ್ದ ಸೀಟಿನ ಬಳಿ ನಿಂತಿದ್ದ ಯುವತಿಯೊಬ್ಬಳ ಬ್ಯಾಗ್ ಹಿಡಿದುಕೊಳ್ಳುವಂತೆ ಇಸ್ಹಾಕ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.

ಯುವತಿ ತಾನು ಇಳಿಯುವ ಜಾಗ ತಲುಪಿದಾಗ ಇಸ್ಹಾಕ್ ಅವರಿಂದ ಬ್ಯಾಗ್ ಪಡೆದು ಬಸ್ಸಿನಿಂದ ಇಳಿದು ಹೋಗಿದ್ದಾರೆ. ಬಳಿಕ ದುಷ್ಕರ್ಮಿಗಳು ಇಸ್ಹಾಕ್ ಅವರನ್ನು ಬಸ್ಸಿನಿಂದ ಕೆಳಗಿಳಿಸಿ ಅವರಿಗೆ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ಗುಂಪು ಇಸ್ಹಾಕ್ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಹಲ್ಲೆಯಿಂದ ಇಸ್ಹಾಕ್ ಅವರ ಬೆನ್ನು, ಕೈ ಕಾಲುಗಳಿಗೆ ತೀವ್ರ ಗಾಯಗಳಾಗಿವೆ.ಬಳಿಕ ಇಸ್ಹಾಕ್ ಅವರನ್ನು ಗುಂಪು ಪೊಲೀಸರಿಗೆ ಹಸ್ತಾಂತರಿಸಿದೆ.ಪೊಲೀಸರು ಇಸ್ಹಾಕ್ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಠಾಣೆಗೆ ಕರೆದೊಯ್ದಿದ್ದರು.

ಘಟನೆ ಬಗ್ಗೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿತ್ತು.ದುಷ್ಕರ್ಮಿಗಳನ್ನು ಬಂಧಿಸಿ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಹಲವು ಸಂಘಟನೆಗಳು, ರಾಜಕೀಯ ಮುಖಂಡರು ಆಗ್ರಹಿಸಿದ್ದರು.

- Advertisement -
spot_img

Latest News

error: Content is protected !!