ಒಡಿಶಾ ಒಟ್ಟಿಗೆ ಕಾಡಿಗೆ ತೆರಳಿ ಮೂವರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ನವರಂಗಪುರದಲ್ಲಿ ನಡೆದಿದೆ.
ನಿನ್ನೆ ಸಂಜೆ ಸುಮಾರು 4.30ಕ್ಕೆ ಒಟ್ಟಿಗೇ ಕಾಡಿಗೆ ಹೋದ ಮೂವರು ಯುವತಿಯರು ರಾತ್ರಿ ವೇಳೆಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅದರಲ್ಲೂ ಒಂದೇ ಮರಕ್ಕೆ ಮೂವರೂ ನೇಣು ಬಿಗಿದುಕೊಂಡಿದ್ದಾರೆ. ಮೃತ ಯುವತಿಯರನ್ನು ತೊಹಾರಾ ಎಂಬ ಹಳ್ಳಿಯ ನಿವಾಸಿಗಳಾದ ಹೇಮಲತಾ ಗೌಡಾ (21), ಕೌಸಲ್ಯಾ ಮಜ್ಹಿ (17) ಮತ್ತು ಫುಲಮತಿ ಮಜ್ಹಿ (16) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ಮೂವರು ಜೊತೆಗೆ ಕಾಡಿಗೆ ಹೋಗುವುದನ್ನು ನೋಡಿದವರು ಇದ್ದಾರೆ. ಆದರೆ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ರಾತ್ರಿ 9.30 ಆದರೂ ಹುಡುಗಿಯರು ಬಾರದೆ ಇದ್ದಾಗ ತಕ್ಷಣ ಅವರನ್ನು ಹುಡುಕುತ್ತ ಹೋಗಿದ್ದಾರೆ. ಕಾಡಿನಲ್ಲಿ ಸ್ವಲ್ಪ ಹೊತ್ತು ಹುಡುಕಿದ ಸ್ಥಳೀಯರಿಗೆ ಒಂದೇ ಮರಕ್ಕೆ ಮೂವರ ಶವವನೂ ನೇತಾಡುತ್ತಿರುವ ದೃಶ್ಯ ಕಂಡಿದೆ. ಕೂಡಲೇ ಸ್ಥಳೀಯರು, ಕೂಡಲೇ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಇದುವರೆಗೊ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.