- Advertisement -
- Advertisement -
ಚಿಕ್ಕಮಗಳೂರು : ಚಿರತೆಯ ಚರ್ಮವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಫ್ಯಾಕ್ಟರಿ ಬಡಾವಣೆಯ ಸಮುದಾಯ ಭವನದ ಸಮೀಪದಲ್ಲಿ ಮೂವರು ಅಕ್ರಮವಾಗಿ ಚಿರತೆಯ ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ್ದವರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳನ್ನು ಇಂದಾವರದ ಪರ್ವತ, ಚಿಕ್ಕಮಗಳೂರಿನ ಕಾಂತರಾಜ್, ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ
- Advertisement -