- Advertisement -
- Advertisement -
ಬಂಟ್ವಾಳ: ಹೋಟೆಲ್ವೊಂದರ ನೌಕರರು ದೈವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ತ್ಯಾಜ್ಯ ಎಸೆಯುವಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಸೆ.12 ರ ಮಧ್ಯರಾತ್ರಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಬಳಿ ನಡೆದಿದೆ.
ಈ ರಸ್ತೆಯಲ್ಲಿ ಬಹಳ ಸಮಯದಿಂದ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ಗಮನಿಸುತ್ತಿದ್ದ ಸಾರ್ವಜನಿಕರು ಕಸ ಎಸೆಯುತ್ತಿರುವವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕೆಂದು ಕಾಯುತ್ತಿದ್ರು. ಕೊನೆಗೂ ನಿನ್ನೆ ಸಿಕ್ಕಿಬಿದ್ದಿದ್ದಾರೆ.
ಇನ್ನು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿದ್ದವರನ್ನು ಠಾಣೆಗೆ ಕರೆದೊಯ್ದಿದಿದ್ದಾರೆ ಎಂದು ತಿಳಿದು ಬಂದಿದೆ.
- Advertisement -