- Advertisement -
- Advertisement -
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಜಯಂತಿ ಅವರ ಮನೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿರುವ ಘಟನೆ ನಡೆದಿದೆ.
ಶಿಲ್ಪ (21), ಜಯಂತಿ (38), ರಾಜೇಶ್ ನಾಯ್ಕ (44), ಲಿಖಿತ್ ರಾಜ್ (16) ಎಂಬುವವರು ಗಾಯಗೊಂಡಿದ್ದು, ಮನೆಗೂ ಹಾನಿಯಾಗಿದೆ.
ಸ್ಥಳೀಯ ವೈದ್ಯಾಧಿಕಾರಿಯವರ ಸಲಹೆ ಮೇರೆಗೆ ಗಾಯಾಳುಗಳನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಕಚೇರಿ ಮಾಹಿತಿ ನೀಡಿದೆ.
- Advertisement -