- Advertisement -
- Advertisement -
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಂಗಳೂರು ಭೇಟಿ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆಯಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ವೇದಿಕೆ ಕಾರ್ಯಕ್ರಮ ಶುರುವಾಗಲಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರನ್ನು ಸ್ವಾಗತಿಸಲು ದಕ್ಷಿಣ ಕನ್ನಡ ಜಿಲ್ಲೆ ಸಜ್ಜುಗೊಂಡಿದೆ. ಕಾರ್ಯಕ್ರಮದ ಸಮಯ ಬದಲಾವಣೆ ಆಗಿರುವುದರಿಂದ ಜನ ೧೧.೩೦ ರೊಳಗೆ ಸಭಾ ಮೈದಾನ ತಲುಪಬೇಕಿದೆ ಎಂದು ತಿಳಿಸಿದ್ದಾರೆ.
- Advertisement -