- Advertisement -
- Advertisement -
ಮಂಗಳೂರು : ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ಟಿಪ್ಪರ್ ಫ್ಲೈ ಓವರ್ನ ಪಿಲ್ಲರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಮದ್ದೂರಿನ ಬೆಂಗಳೂರು – ಮೈಸೂರು ಹೆದ್ದಾರಿಯ ಎಲ್.ಐ.ಸಿ ಕಛೇರಿಯ ಮುಂಭಾಗವೇ ಈ ಘಟನೆ ನಡೆದಿದೆ .
ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ಟಿಪ್ಪರ್ ತೆರಳುತ್ತಿತ್ತು . ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಫ್ಲೈ ಓವರ್ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆಯಲ್ಲಿ ಚಾಲಕ ವಾಹನದೊಳಗೆ ಸಿಲುಕಿ ಹೊರಬರಲು ಆಗದೇ ಟಿಪ್ಪರ್ನಲ್ಲೇ ಸಜೀವ ದಹನವಾಗಿದ್ದಾನೆ .
ಹಾಸನ ಮೂಲದ ದಿನೇಶ್ ಮೃತ ಚಾಲಕ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿ ಚಾಲಕನ ಶವವನ್ನು ಹೊರ ತೆಗೆದಿದ್ದಾರೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -