- Advertisement -
- Advertisement -
ಬೆಂಗಳೂರು: ಇಂದು ಮಧ್ಯಾಹ್ನ 12.30ಕ್ಕೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
ಫಲಿತಾಂಶವು https://kseeb.kar.nic.in, https://sslc.karnataka.gov.in, https://karresults.nic.in ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಲಭ್ಯವಾಗಲಿದೆ.
ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಒತ್ತಡ ದಲ್ಲಿರುವವರು 080-46110007 ಸಂಖ್ಯೆಗೆ ಕರೆ ಮಾಡಿದರೆ ಅವರಿಗೆ ಟೆಲಿ ಕೌನ್ಸೆಲಿಂಗ್ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ.
- Advertisement -