- Advertisement -
- Advertisement -
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ , ಪವಿತ್ರ ಗೌಡ ಸೇರಿ ಒಟ್ಟು 19 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಗಳು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿದ್ದಾರೆ. ಈಗಾಗಲೇ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಸ್ವಇಚ್ಛಾ ಹೇಳಿಕೆ ನೀಡಿದ್ದು, ತನಿಖೆ ಮುಕ್ತಾಯದ ಹಂತಕ್ಕೆ ಬಂದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಂತ್ರಿಕ ಸಾಕ್ಷ್ಯ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಸಾಂದರ್ಭಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ತನಿಖೆಗೆ ಬೇಕಾದ ಅಗತ್ಯ ಸಾಕ್ಷ್ಯಗಳನ್ನು ಇಟ್ಟುಕೊಂಡಿದ್ದಾರೆ. ಹಾಗಾಗಿ ತನಿಖೆ ಬಹುತೇಕ ಮುಕ್ತಾಯವಾಗಿರೋದರಿಂದ ಪೊಲೀಸರು ಇಂದೇ ಕೊಲೆ ಆರೋಪಿಗಳನ್ನು ಕೋರಮಂಗಲದ ಜಡ್ಜ್ ಮುಂದೆ ಹಾಜರಪಡಿಸಲು ಸಿದ್ದತೆ ನಡೆಸಿದ್ದು, ಇಂದು ಕೋರ್ಟ್ ಅನುಮತಿ ಪಡೆದು ದರ್ಶನ್ ಮತ್ತು ಸಹಚರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದೆ.
- Advertisement -