- Advertisement -
- Advertisement -
ಬೆಂಗಳೂರು: ಕೃಷಿ ಕಾಯ್ದೆಗಳನ್ನು ಖಂಡಿಸಿ ಇಂದು ರಾಷ್ಟ್ರ ಮಟ್ಟದಲ್ಲಿ ಕಿಸಾನ್ ಮೋರ್ಚಾ ಸೇರಿ ಹಲವು ರೈತ ಸಂಘನೆಗಳು ಹೆದ್ದಾರಿ ಬಂದ್ ನಡೆಸಲಿವೆ. ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್ ನಡೆಸಲಿವೆ.ರಾಜ್ಯದಲ್ಲಿಯೂ ಹೆದ್ದಾರಿ ತಡೆಗೆ ರೈತ ಸಂಘನೆಗಳು ಸನ್ನದ್ಧವಾಗಿವೆ.
ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಹಾಗೆಯೇ ರಸ್ತೆ ಮಧ್ಯೆ ಊಟ ಸಿದ್ಧಪಡಿಸಿ ಸೇವಿಸಲಿದ್ದಾರೆ ಎನ್ನಲಾಗಿದೆ.ನವದೆಹಲಿಯಲ್ಲಿ ಯಲ್ಲಿ ಚಕ್ಕಾ ಜ್ಯಾಮ್ ನಡೆಸುವ ಹಿನ್ನೆಲೆಯಲ್ಲಿ ದಿಲ್ಲಿಯ ಪ್ರತಿಭಟನ ಸ್ಥಳ ಗಳ ಸಮೀಪ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ.
- Advertisement -