- Advertisement -
- Advertisement -
ಮಂಗಳೂರು : ಇಂದು ಪೂ.11ಕ್ಕೆ ಕೊಣಾಜೆಯ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವವು ನಡೆಯಲಿದೆ.
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಘಟಿಕೋತ್ಸವ ಭಾಷಣ ಮಾಡುವರು.
ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಸಿ.ಎನ್. ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
- Advertisement -