- Advertisement -
- Advertisement -
ಸುಬ್ರಹ್ಮಣ್ಯ: ಟಗರು ಪುಟ್ಟಿ ಎಂದು ಖ್ಯಾತಿ ಗಳಿಸಿರುವ ನಟಿ, ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಮಾನ್ವಿತಾ ಕಾಮತ್, ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ” ಬಹಳಷ್ಟು ಜನರಿಗೆ ನಾನು ಕರಾವಳಿಯವಳು ಎಂದು ತಿಳಿದಿಲ್ಲ, ತುಳು ಚಿತ್ರದಲ್ಲಿಯೂ ನಟಿಸಲು ಸಿದ್ದನಿದ್ದೇನೆ ಆದರೆ ಒಳ್ಳೆಯ ಚಿತ್ರಕಥೆ ಬೇಕು. ತುಳು ಚಿತ್ರದ ಕುರಿತಾಗಿ ಯಾವುದೇ ಮಾತುಕತೆ ಇಲ್ಲಿವರೆಗೆ ನಡೆದಿಲ್ಲ ಎಂದರು.
ಹಾಗೇ ನಾನೇ ಒಂದು ಪ್ರೊಡಕ್ಷನ್ ಹೌಸ್ ಅನ್ನು ಹೈದರಬಾದ್ನಲ್ಲಿ ಆರಂಭಿಸಿದ್ದೇನೆ. ಈ ಮೂಲಕ ಒಳ್ಳೆಯ ಕನ್ನಡ ಚಿತ್ರಗಳ ನಿರ್ಮಿಸುವ ಗುರಿ ಇದೆ. ಇದಕ್ಕಾಗಿ ಭಗವಂತನ ಆಶೀರ್ವಾದಕ್ಕಾಗಿ ಇಲ್ಲಿಗೆ ಆಗಮಿಸಿದ್ದೇನೆ ಎಂದರು.
ನನ್ನ ಅಭಿನಯದ ಮರಾಠಿ ಸಿನೆಮಾ ಸದ್ಯದಲ್ಲೇ ರಿಲೀಸ್ ಆಗುವ ಸಾಧ್ಯತೆಯಿದೆ. ಕೊವೀಡ್ ಕಾರಣದಿಂದ ಬಿಡುಗಡೆ ತಡವಾಗಿದೆ ಎಂದು ತಿಳಿಸಿದ್ದಾರೆ.
- Advertisement -