Tuesday, May 14, 2024
Homeಕರಾವಳಿಉಡುಪಿರಾಜ್ಯದಲ್ಲಿ ಅಬ್ಬರಿಸಿದ ಕೊರೊನ : ಇಂದು 308 ಹೊಸ ಸೋಂಕಿತರು ಪತ್ತೆ

ರಾಜ್ಯದಲ್ಲಿ ಅಬ್ಬರಿಸಿದ ಕೊರೊನ : ಇಂದು 308 ಹೊಸ ಸೋಂಕಿತರು ಪತ್ತೆ

spot_img
- Advertisement -
- Advertisement -

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಕಿಲ್ಲರ್ ಕೊರೊನ ಸ್ವಲ್ಪ ಹತೋಟಿಗೆ ಬಂದಂತೆ ಕಾಣುತ್ತಿದ್ದು, ಜನತೆ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇಂದು ಕೂಡ ಉಡುಪಿ 45 ಮತ್ತು ದ.ಕ 3 ಹೊಸ ದೃಢ ಪ್ರಕರಣಗಳು ಪತ್ತೆಯಾಗಿವೆ.
ಆದರೆ ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಹೆಚ್ಚಳವಾಗಿದ್ದು ಜನತೆ ಇನ್ನಷ್ಟು ಆತಂಕಗೊಂಡಿದ್ದಾರೆ . ಇಂದು ರಾಜ್ಯದಲ್ಲಿ ಮತ್ತೆ 308 ಜನರಿಗೆ ಸೋಂಕು ತಾಗಿರುವುದು ದೃಢವಾಗಿದ್ದು, ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 5760ಕ್ಕೆ ಎರಿಕೆಯಾಗಿದೆ.
ಇಂದು ಕಲಬುರಗಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 99 ಜನರಿಗೆ ಸೋಂಕು ಕಾಣಿಸಿಕೊಂಡರೆ, ಯಾದಗಿರಿ ಜಿಲ್ಲೆಯಲ್ಲಿ 66 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.


ಇಂದು ಕಲಬುರ್ಗಿ ಜಿಲ್ಲೆಯಲ್ಲಿ 99 ,ಯಾದಗಿರಿ 66, ಬೀದರ್ ನಲ್ಲಿ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ 1, ರಾಮನಗರ 1 ಸೇರಿದಂತೆ ಒಟ್ಟು 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2519 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಒಟ್ಟು 64 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದು, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

- Advertisement -
spot_img

Latest News

error: Content is protected !!