- Advertisement -
- Advertisement -
ಬೆಂಗಳೂರು: ಬಿಜೆಪಿ ತೊರೆದು, ಸ್ವಂತ ಪಕ್ಷ ಕಟ್ಟಿ ಆ ಪಕ್ಷದಿಂದಲೇ ಗೆಲುವು ಸಾಧಿಸಿದ್ದಂತ ಮಾಜಿ ಸಚಿವ ಜನಾರ್ಧನ ರೆಡ್ಡಿ ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು ನಾಳೆ ಜನಾರ್ಧನ ರೆಡ್ಡಿ ಮತ್ತೆ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಂತ ಜನಾರ್ಧನ ರೆಡ್ಡಿ ಅವರು, ಅಂತಿಮ ಸುತ್ತಿನ ಮಾತುಕತೆಯನ್ನು ನಡೆಸಿದ್ದರು. ಈ ಬಳಿಕ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹಸಿರು ನಿಶಾನೆಯನ್ನು ತೋರಿರೋದಾಗಿ ತಿಳಿದು ಬಂದಿದೆ.
ಇನ್ನೂ ಮಾರ್ಚ್.25ರ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.
- Advertisement -