- Advertisement -
- Advertisement -
ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದು, ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ಬಂದ್ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ರಾಜ್ಯ ಸರ್ಕಾರವು 6 ನೇ ವೇತನ ಆಯೋಗದ ವರದಿ ಜಾರಿಗೆ ಹಿಂದೇಟು ಹಾಕುತ್ತಿದೆ ಎಂಬ ಕಾರಣಕ್ಕೆ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ. ಬಿಎಂಟಿಸಿ, ಕೆಎಸ್ ಆರ್ ಟಿಸಿ, ಎನ್ ಡಬ್ಲ್ಯೂಕೆಆರ್ ಟಿಸಿ, ಎನ್ಇಕೆಆರ್ ಟಿಸಿ ಸಿಬ್ಬಂದಿ ಕುಟುಂಬ ಸಮೇತರಾಗಿ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.
ಮುಷ್ಕರದಿಂದ ಬೆಂಗಳೂರಿನಲ್ಲಿ ಪ್ರತಿನಿತ್ಯ ಸಂಚರಿಸುತ್ತಿದ್ದ ಸುಮಾರು ಆರು ಸಾವಿರ ಬಸ್ಸುಗಳು ಇಂದು ಮಧ್ಯಾಹ್ನದಿಂದಲೇ ಸ್ತಬ್ಧವಾಗಲಿವೆ ಎನ್ನಲಾಗಿದೆ. ಜೊತೆಗೆ ರಾಜ್ಯಾದ್ಯಂತ ಸುಮಾರು 20 ಸಾವಿರ ಬಸ್ಸುಗಳು ಸಂಚಾರ ನಿಲ್ಲಿಸಲಿದ್ದು, ಸುಮಾರು ಒಂದು ಕೋಟಿ ಮಂದಿ ಸಮಸ್ಯೆ ಅನುಭವಿಸಲಿದ್ದಾರೆ ಎನ್ನಲಾಗಿದೆ.
- Advertisement -