- Advertisement -
![]()
- Advertisement -
ಬೆಂಗಳೂರು : ಇಂದು ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆಯಾಗಿದ್ದು, ನಾಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷವು ಈಗಾಗಲೇ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ, 10 ಕೆಜಿ ಉಚಿತ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, ಅಂಗನವಾಡಿ, ಆಶಾ, ಬಿಸಿಯೂಟ ನೌಕರರಿಗೆ ಗೌರವ ಧನ ಹೆಚ್ಚಳ ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದೆ.
ಪ್ರಣಾಳಿಕೆಯಲ್ಲಿ ಮತ್ತಷ್ಟು ಭರಪೂರ ಘೋಷಣೆ ಮಾಡುವ ಸಾಧ್ಯತೆ ಇದೆ. ಮಹಿಳೆಯರು, ಯುವಕರು, ರೈತರು, ಕೂಲಿ ಕಾರ್ಮಿಕರು, ಆದಿವಾಸಿಗಳು, ದಲಿತರು, ಒಬಿಸಿ, ಅಲ್ಪಸಂಖ್ಯಾತರು, ಅಪಾರ್ಟ್ಮೆಂಟ್ ನಿವಾಸಿಗಳನ್ನು ಗುರಿಯಾಗಿಸಿಕೊಂಡು ಪ್ರಣಾಳಿಕೆ ಸಿದ್ಧಪಡಿಸಲಿದ್ದಾರೆ ಎನ್ನಲಾಗಿದೆ.
- Advertisement -


