Saturday, June 28, 2025
Homeಕರಾವಳಿಉಡುಪಿಕುಂದಾಪುರ : ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ: ಒಟ್ಟು ನಾಲ್ವರು ಆರೋಪಿಗಳ ಬಂಧನ

ಕುಂದಾಪುರ : ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ: ಒಟ್ಟು ನಾಲ್ವರು ಆರೋಪಿಗಳ ಬಂಧನ

spot_img
- Advertisement -
- Advertisement -

ಕುಂದಾಪುರ : ತಲ್ಲೂರು ಗ್ರಾಪಂ ವ್ಯಾಪ್ತಿಯ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಜೀಜ್ ಜೊತೆ ಉಳಿದ ಮೂವರು ಆರೋಪಿಗಳನ್ನು ಕುಂದಾಪುರ ಡಿವೈಎಸ್ಪಿ ಹಾಗೂ ಸಿಪಿಐ ನೇತೃತ್ವದಲ್ಲಿ ಪೊಲೀಸರ ತಂಡ ಬಂಧಿಸಿದೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿಯಲ್ಲಿ ಅಜೀಜ್(32) ಹಾಗೂ ಆತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಸಹೋದರರಾದ ರಹೀಮ್ (34), ಅಬ್ದುಲ್ ಖಾದರ್(45) ಕಾಸರಗೋಡಿನ ರಶೀದ್(25) ಎಂಬವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯವು ಪ್ರಕರಣದ ಪ್ರಮುಖ ಆರೋಪಿ ಅಜೀಜ್ ಗೆ ಜೂ.6ರ ವರೆಗೆ ಪೊಲೀಸ್ ಕಸ್ಟಡಿ ಹಾಗೂ ಉಳಿದ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ತಲ್ಲೂರಿನ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ, ಕಳೆದ ವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಿಸದೆ ಆಕೆ ಮೃತಪಟ್ಟಿದ್ದಳು. ಆಕೆಯ ಆತ್ಮಹತ್ಯೆಗೆ ಅಜೀಜ್ ಹಾಗೂ ಆತನ ಪತ್ನಿ ಕಾರಣ ಎಂದು ಮೃತರ ಸಹೋದರ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -
spot_img

Latest News

error: Content is protected !!