Saturday, May 18, 2024
Homeಕರಾವಳಿಚಾರ್ಮಾಡಿ‌ ಘಾಟಿಯಲ್ಲಿ‌ ಕೆಟ್ಟು‌ ನಿಂತ ಲಾರಿ: ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆ

ಚಾರ್ಮಾಡಿ‌ ಘಾಟಿಯಲ್ಲಿ‌ ಕೆಟ್ಟು‌ ನಿಂತ ಲಾರಿ: ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆ

spot_img
- Advertisement -
- Advertisement -

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು‌ ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಯಿತು.
ಚಾರ್ಮಾಡಿ ಘಾಟಿಯ  10 ನೇ ತಿರುವಿನಲ್ಲಿ ನಿನ್ನೆ ರಾತ್ರಿ ಸುಮಾರು 8.30 ರ  ವೇಳೆಗೆ  ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತಿತ್ತು.‌  ಪರಿಣಾಮ  ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಬೆಂಗಳೂರು ಸೇರಿಂತೆ ಇನ್ನಿತರ ಕಡೆಗಳಿಗೆ ಹೋಗುವ ಬಸ್ ಹಾಗೂ ಇತರ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.

ಈ ಬಗ್ಗೆ ಮಾಹಿತಿ ಪಡೆದ ಹೊಯ್ಸಳದ   ಪೊಲೀಸರು ಕೊಟ್ಟಿಗೆ ಹಾರ ಚಾರ್ಮಾಡಿ ಗೇಟ್ ಬಳಿ‌  ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಂತರ  ಕ್ರೇನ್ ತರಿಸಿ ಟ್ಯಾಂಕರ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈಗಾಗಲೇ ಶಿರಾಡಿ, ಸಂಪಾಜೆಯಲ್ಲಿ ಮಾರ್ಗ ಕುಸಿತದಿಂದ ವಾಹನ ಸಂಚಾರಕ್ಕೆ ತಡೆಯಾಗಿರುವುದರಿಂದ ಹೆಚ್ಚಿನ  ವಾಹನ ಸಂಚಾರ ಈ ರಸ್ತೆಯಲ್ಲಿ‌ಇದೆ. ವಾಹನ ದಟ್ಟನೆ‌ ಹಾಗೂ ಅತೀ ಹೆಚ್ಚು ಬಸ್ಸುಗಳು ಸಂಚಾರಿಸುವುದರಿಂದ‌ ನಿಯಂತ್ರಿಸಲು‌ ಪೊಲೀಸರು ಹರ ಸಾಹಸ ಪಡುವಂತಾಯಿತು. ಸ್ಥಳದಲ್ಲಿ ಹೊಯ್ಸಳದ ಪಿಎಸ್  ವೆಂಕಪ್ಪ ಮತ್ತು ಬಸವರಾಜ್, ಸಂಚಾರಿ ಠಾಣೆಯ ಪಿಎಸ್ ಐ ಓಡಿಯಪ್ಪ, ಹಾಗೂ ಶಿವರಾಮ ರೈ ಕುಮಾರ್  ಇದ್ದರು.

- Advertisement -
spot_img

Latest News

error: Content is protected !!