- Advertisement -
- Advertisement -
ಬೆಂಗಳೂರು: ಕಳೆದ 15 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿರುವ ಸಾರಿಗೆ ನೌಕರರ ಪ್ರತಿಭಟನೆ ಕೊನೆಗೂ ಅಂತ್ಯವಾಗಿದೆ. ಈ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಎಂದಿನಂತೆ ಬಸ್ ಗಳು ಸಂಚಾರ ನಡೆಸಲಿವೆ.
ಇನ್ನು ನಿನ್ನೆಯಷ್ಟೇ ಹೈಕೋರ್ಟ್ ಸಾರಿಗೆ ನೌಕಕರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ನೋಟಿಸ್ ನ್ನು ನೀಡಿತ್ತು. ಅದರಂತೆ ಇಂದು ಮುಷ್ಕರವನ್ನು ಕೈಬಿಟ್ಟಿದ್ದಾರೆ ಸಾರಿಗೆ ನೌಕರರು. ಹಾಗಾಗಿ ನಾಳೆಯಿಂದ ಎಂದಿನಂತೆ ರಾಜ್ಯದಾದ್ಯಂತ ಬಸ್ ಸಂಚಾರ ಆರಂಭವಾಗಲಿದೆ.
- Advertisement -