- Advertisement -
- Advertisement -
ಬೆಳ್ತಂಗಡಿ: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ಆರಂಭದಲ್ಲಿ ಮರ ಬಿದ್ದು ಗುರುವಾರ ಬೆಳಗ್ಗೆ ರಸ್ತೆ ತಡೆ ಉಂಟಾಗಿದ್ದು,ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ನಡೆಯಿತು.
ಚಾರ್ಮಾಡಿ ಘಾಟ್ ನಲ್ಲಿ ಮುಂಜಾನೆ ಅತೀ ಹೆಚ್ಚಿನ ವಾಹನಗಳು ಸಂಚರಿಸುವುದರಿಂದ ಎರಡು ಕಡೆ ರಸ್ತೆ ತಡೆ ಉಂಟಾಗಿದೆ.ಮುಂಜಾನೆ 8.45 ರ ಸುಮಾರಿಗೆ ಮರ ಬಿದ್ದಿದ್ದು, ಇದೀಗ ತೆರವು ಕಾರ್ಯ ಯಶಸ್ವಿಯಾಗಿದೆ. ಸುಮಾರು 100 ಕ್ಕೂ ಅಧಿಕ ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿತ್ತು. ಚಾರ್ಮಾಡಿ ಹಸನಬ್ಬ ಸಹಿತ ಹಲವು ಸಮಾಜ ಸೇವಕರು ತಕ್ಷಣ ಸ್ಥಳಕ್ಕೆ ಧಾವಿಸಿ ಮರ ತೆರವುಗೊಳಿಸಿದ್ದಾರೆ.
- Advertisement -