- Advertisement -
- Advertisement -
ಬೆಳ್ತಂಗಡಿ; ತಲೆ ಮೇಲೆ ಮರ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ (55 )ಮೃತ ದುರ್ದೈವಿ.
ಗಾಯತ್ರಿ ಅವರು ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ಕಡಿಯುವಾಗ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
- Advertisement -