- Advertisement -
- Advertisement -
ಬಂಟ್ವಾಳ: ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ.
ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಈ ಹಿನ್ನೆಲೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು.
ಮರ ಬಿದ್ದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ವಿದ್ಯುತ್ ಕಂಬಗಳು ಸಹ ಧರೆಗುರುಳಿವೆ. ಸ್ಥಳೀಯರು ಮರ ತೆರವು ಗೊಳಿಸಿದ್ದಾರೆ.
- Advertisement -