Thursday, May 16, 2024
Homeಕರಾವಳಿತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಆಡಿಯೋ ವಿವಾದ- ತುಳು ರಾಜ್ಯಕ್ಕಾಗಿ ಕತ್ತಲ್‌ಸಾರ್...

ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಆಡಿಯೋ ವಿವಾದ- ತುಳು ರಾಜ್ಯಕ್ಕಾಗಿ ಕತ್ತಲ್‌ಸಾರ್ ಹೇಳಿದ್ದೇನು?

spot_img
- Advertisement -
- Advertisement -

ಮಂಗಳೂರು:ಕೆಲವು ದಿನಗಳಿಂದ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬಾಂಬ್ ಸ್ಫೋಟಿಸುವಂತೆ ಆಡಿಯೋ ಒಂದು ಹರಿದಾಡುತ್ತಿದೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ನೀಡಿದ್ದರೆನ್ನಲಾದ ಪ್ರಚೋದನಾತ್ಮಕ ಹೇಳಿಕೆಯ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಪ್ರತ್ಯೇಕ ತುಳು ರಾಜ್ಯಕ್ಕಾಗಿ ಎಲ್ಲೆಡೆ ಹೋರಾಟ ಆಗಬೇಕು. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ‘ಬ್ಲಾಸ್ಟ್’ ಮಾಡಬೇಕು. ಟಯರ್‌ಗಳಿಗೆ ಬೆಂಕಿ ಹಚ್ಚಬೇಕು. ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು ಸೇರಿದಂತೆ ರಾಜಕೀಯ ನಾಯಕರಿಗೆಲ್ಲ ಹಿಗ್ಗಾಮುಗ್ಗ ಬೈಯ್ಯಬೇಕು ಎಂದು ಹೇಳುತ್ತಿರುವುದು ವೈರಲ್ ಆಡಿಯೋದಲ್ಲಿ ಕೇಳಿಬರುತ್ತಿದೆ.

ಈ ಬಗ್ಗೆ ಮಾತನಾಡಿರುವ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ”ಪ್ರತ್ಯೇಕ ತುಳು ರಾಜ್ಯ ಸ್ಥಾಪನೆಯ ಬೇಡಿಕೆಯ ವಿಚಾರವಾಗಿ ತುಳುನಾಡು ಟ್ರಸ್ಟ್ ಸ್ಥಾಪಕಾಧ್ಯಕ್ಷ ಜಿ.ವಿ.ಎಸ್.ಉಳ್ಳಾಲ್ ನನ್ನೊಂದಿಗೆ ಚರ್ಚಿಸಿದ್ದರು. ಈ ವೇಳೆ ಕ್ಯಾಶುವಲ್ ಆಗಿ ಮಾತನಾಡುತ್ತಾ ತುಳು ರಾಜ್ಯಕ್ಕೆ ನನ್ನ ಬೆಂಬಲವಿದೆ ಎಂದಿದ್ದೆ.

ಆದರೆ ನಾನು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ನಡೆದಂತೆ ಹಿಂಸಾತ್ಮಾಕ ಹೋರಾಟ ಮಾಡುವುದು ಸರಿಯಲ್ಲ ಎಂದು ಹೇಳಿದ್ದೆ. ಇದೀಗ ಉದ್ದೇಶಪೂರ್ವಕವಾಗಿ ನನ್ನ ಮಾತುಗಳನ್ನು ಎಡಿಟ್ ಮಾಡಿ ತಿರುಚಿ ವೈರಲ್ ಮಾಡಿದ್ದಾರೆ. ಪರಿಶಿಷ್ಟ ಸಮುದಾಯದ ನಾನು ಈ ಮಟ್ಟಕ್ಕೇರಿರುವುದರ ಬಗ್ಗೆ ಹಲವರಿಗೆ ಹೊಟ್ಟೆಕಿಚ್ಚಿದೆ. ಇದೇ ಕಾರಣಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

- Advertisement -
spot_img

Latest News

error: Content is protected !!