Thursday, May 2, 2024
Homeಕರಾವಳಿತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವರವರಿಗೆ ಬೀಳ್ಕೊಡುಗೆ ಸಮಾರಂಭ

ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವರವರಿಗೆ ಬೀಳ್ಕೊಡುಗೆ ಸಮಾರಂಭ

spot_img
- Advertisement -
- Advertisement -

ಪುತ್ತೂರು: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್ ಗಂಗಾಧರ ಆಳ್ವರವರು ಸೇವಾ ನಿವೃತ್ತಿ ಹೊಂದಲಿದ್ದು, ಇದರ ಪ್ರಯುಕ್ತ ಮಾ. 2 ಶನಿವಾರದಂದು ಬೀಳ್ಕೊಡುಗೆ ಸಮಾರಂಭವನ್ನು ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಹ್ನ 3.30ರಿಂದ ಹಮ್ಮಿಕೊಳ್ಳಲಾಗಿದೆ.

ಕೆ.ಎನ್.ಗಂಗಾಧರ ಆಳ್ವರು ತನ್ನ ಶಾಲಾ ದಿನಗಳಿಂದಲೇ ಪಾಠ- ಪಾಠೇತರ ಚಟುವಟಿಕೆಗಳಲ್ಲಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದವರು. ಬೇರೆ ಬೇರೆ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 1992 ರಿಂದ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ನಿಯುಕ್ತರಾದರು. 1995 ರಲ್ಲಿ ಇದೇ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಪದೋನ್ನತಿ ಪಡೆದರು.

- Advertisement -
spot_img

Latest News

error: Content is protected !!