Sunday, April 28, 2024
Homeಕರಾವಳಿತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರ ಕೊಲೆ ಪ್ರಕರಣ: ಆರು ಜನರನ್ನು ಬಂಧಿಸಿದ ತುಮಕೂರು ಪೊಲೀಸರು;...

ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರ ಕೊಲೆ ಪ್ರಕರಣ: ಆರು ಜನರನ್ನು ಬಂಧಿಸಿದ ತುಮಕೂರು ಪೊಲೀಸರು; ಬೆಂಕಿ ಹಚ್ಚಲು 15 ಲೀಟರ್ ಪೆಟ್ರೋಲ್ ಬಳಸಿದ್ದ ಪಾಪಿಗಳು

spot_img
- Advertisement -
- Advertisement -

ಬೆಳ್ತಂಗಡಿ : ತುಮಕೂರಿನಲ್ಲಿ ಮೂವರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮತ್ತೆ ಆರು ಜನರನ್ನು ತುಮಕೂರು ಜಿಲ್ಲೆಯ ಕೋರಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

22-03-2024 ರಂದು ಮಧ್ಯಾಹ್ನ ಸುಮಾರು 1.15 ಗಂಟೆಗೆ ಕೋರಾ ಪೊಲೀಸ್ ಠಾಣಾವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಒಂದು ಕಾರಿನಲ್ಲಿ 3 ಮನುಷ್ಯರ ದೇಹಗಳು ಸುಟ್ಟ ಸ್ಥಿತಿಯಲ್ಲಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕೋರಾ ಪೊಲೀಸ್ ಠಾಣೆಯ ಪಿಎಸ್‌ಐ ರವರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ  ಒಂದು ಮಾರುತಿ ಸುಜುಕಿ S-PRESSO ಕಾರಿನ ಹಿಂಭಾಗದ ಸೀಟಿನಲ್ಲಿ ಒಂದು ಮತ್ತು ಡಿಕ್ಕಿಯಲ್ಲಿ ಎರಡು ದೇಹಗಳು ಸುಟ್ಟು ಕರಕಲಾಗಿದ್ದು, ಯಾರೋ ದುಷ್ಕರ್ಮಿಗಳು ಯಾರೋ 3 ಜನರನ್ನು ಯಾವುದೋ ಕಾರಣಕ್ಕೆ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಪೆಟ್ರೋಲ್ ಅಥವಾ ಬೇರಾವುದೋ ಇಂಧನ ಸುರಿದು ಬೆಂಕಿ ಹಚ್ಚಿ ಸುಟ್ಟಿರೋದು ಕಂಡು ಬಂದಿತ್ತು.ಅದರಂತೆ ಕೋರಾ ಪೊಲೀಸ್ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸುತ್ತಿದ್ದ ಪೊಲೀಸರು ಮೂವರಿದ್ದ ಕಾರಿನ ನಂಬರಿನ ಮೂಲಕ ಮಾಹಿತಿ ಸಂಗ್ರಹಿಸಿ ಇಬ್ಬರು ಆರೋಪಿಗಳಾದ ಪಾತರಾಜು @ರಾಜು ಮತ್ತು ಗಂಗರಾಜು ಎಂಬವರನ್ನು ಲಾಕ್ ಮಾಡಿ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ.

ಪ್ರಮುಖ ಆರೋಪಿಗಳ ಬಂಧನ:  ತುಮಕೂರಿನ
ಶಿರಾ ಗೇಟ್‌ನಲ್ಲಿ ವಾಸವಿರುವ 1) ಪಾತರಾಜು @ ರಾಜು @ ರಾಜಗುರು @ಕುಮಾರ್,  ಇನ್ನೊರ್ವ ಆರೋಪಿಸತ್ಯಮಂಗಲದ ವಾಸಿ ಗಂಗರಾಜು ಬಿನ್ ಹನುಮಂತರಾಯಪ್ಪ ಎಂಬಾತನನ್ನು ಮಾ.25 ರಂದು  ಬಂಧಿಸಿ. ಏಳು ದಿನಗಳ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.

ಬಾಕಿ ಉಳಿದ ಆರು ಜನರ ಬಂಧನ:ಪ್ರಕರಣ ಬಳಿಕ ಪರಾರಿಯಾದ ಆರು ಜನ ಆರೋಪಿಗಳಾದ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂದನ್(24) , ಸಂತೇಪೇಟೆಯ ನವೀನ್(24) ,ವೆಂಕಟೇಶಪುರದ ಕೃಷ್ಣ(22), ಹೊಂಬಯ್ಯನಪಾಳ್ಯದ ಗಣೇಶ್(19), ನಾಗಣ್ಣನಪಾಳ್ಯದ ಕಿರಣ್(23) ,ಕಾಳಿದಾಸನಗರದ ಸೈಮನ್(18) ಸೇರಿ ಆರು ಜನರನ್ನು ಮುರುಡೇಶ್ವರದ ಲಾಡ್ಜ್ ನಲ್ಲಿ ಮಾ.26 ರಂದು ಸಂಜೆ ಬಂಧಿಸಿ ತುಮಕೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಏಳು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ಪ್ರಮುಖ ಆರೋಪಿ ಮಾಹಿತಿ ಮೇರೆಗೆ ಪರಾರಿಯಾಗಿದ್ದ ಆರು ಜನ ಆರೋಪಿಗಳು:

ಆರು ಜನ ಆರೋಪಿಗಳು ತುಮಕೂರಿನಲ್ಲಿ ಹೂ ಮಾರಾಟದ ಲೈನ್ ನಲ್ಲಿ ಕೆಲಸ ಮಾಡುವ ಯುವಕರಾಗಿದ್ದು ಮೂರು ಕೆಜಿ ಚಿನ್ನ ಸಿಗುವ ಆಸೆಯಲ್ಲಿ ಪಾತರಾಜ್ ಮಾಹಿತಿಯಂತೆ ಕೇವಲ 8,000 ಹಣವನ್ನು ಪಡೆದು ಕೊಲೆ ಮಾಡಿದ್ದಾರೆ.ಬಳಿಕ ರೈಲು ಮೂಲಕ ಮುರುಡೇಶ್ವರದ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು‌. ಪಾತರಾಜ್ ಲಾಕ್ ಆಗಿ ಪೊಲೀಸರ ವಿಚಾರಣೆಯಲ್ಲಿ ಉಳಿದ ಆರು ಜನ ಆರೋಪಿಗಳ ಮಾಹಿತಿ ನೀಡಿದ್ದ‌ ಎನ್ನಲಾಗಿದೆ.

ಕೊಲೆಗೆ 15 ಲೀಟರ್ ಪೆಟ್ರೋಲ್ ಬಳಕೆ :
ಕೊಲೆ ಮಾಡಿದ ಬಳಿಕ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಲು ಆರೋಪಿಗಳು ಪಕ್ಕದ ಪೆಟ್ರೋಲ್ ಪಂಪ್ ನಿಂದ 15 ಲೀಟರ್ ಪೆಟ್ರೋಲ್ ಖರೀದಿ ಮಾಡಿ ತಂದಿರುವ ಬಗ್ಗೆ ಪೊಲೀಸರಿಗೆ ಸಿಸಿಕ್ಯಾಮರದ ದೃಶ್ಯ ಸಾಕ್ಷಿಯಾಗಿ ಸಿಕ್ಕಿದೆ‌.

- Advertisement -
spot_img

Latest News

error: Content is protected !!