- Advertisement -
- Advertisement -
ಚಿಕ್ಕಮಗಳೂರು: ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗದ ಆತಂಕ ಎದುರಾಗಿದೆ.
ಒಂಟಿ ಸಲಗ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದು, ಘಾಟ್ ನಲ್ಲಿ ಪ್ರಯಾಣಿಸುವ ವಾಹನ ಸವಾರರು ಆತಂಕದಲ್ಲೇ ಸಂಚಾರ ಮಾಡುವಂತಾಗಿದೆ.
ರಸ್ತೆಯಲ್ಲಿ ವಾಹನ ಸಂಚಾರದ ವೇಳೆ ಒಂಟಿ ಸಲಗ ವಾಹನ ಸವಾರರಿಗೆ ಎದುರಾಗಿದ್ದು ಆತಂಕ ಹುಟ್ಟಿಸಿದೆ.
ಒಂಟಿ ಸಲಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಘಾಟ್ ನಲ್ಲಿ ಎಚ್ಚರಿಕೆಯಿಂದ ಪ್ರಯಾಣ ಮಾಡುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
- Advertisement -