Monday, May 6, 2024
Homeತಾಜಾ ಸುದ್ದಿರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಎಸ್ಐಟಿ...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಎಸ್ಐಟಿ ತಂಡ

spot_img
- Advertisement -
- Advertisement -

ಬೆಂಗಳೂರು : ಇಂದಿನಿಂದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ಎಸ್ ಐ ಟಿ ತಂಡ ತಮ್ಮ ತನಿಖೆಯನ್ನು ಆರಂಭಿಸಿವೆ. ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ಕೊಟ್ಟಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವಂತ ತಂಡವು, ವಶಕ್ಕೆ ಪಡೆದು, ವಿಚಾರಣೆ ಶುರುಮಾಡಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್ ಐ ಟಿ ತನಿಖೆಗೆ ಆದೇಶಿತ್ತು. ಇಂತಹ ತನಿಖೆಯ ನೇತೃತ್ವವವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ತಂಡಕ್ಕೆ ವಹಿಸಿತ್ತು. ಇಂದಿನಿಂದ ತನಿಖೆ ಆರಂಭಿಸಿರುವಂತ ಎಸ್ ಐ ಟಿ ಅಧಿಕಾರಿಗಳು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ನೀಡಿದಂತ ಯಶವಂತಪುರದಲ್ಲಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ. ಹೀಗಾಗಿ ಎಸ್ ಐಟಿ ತನಿಖೆ ಈಗ ಕುತೂಹಲ ಮೂಡಿಸಿದೆ.

- Advertisement -
spot_img

Latest News

error: Content is protected !!