- Advertisement -
- Advertisement -
ಬೆಂಗಳೂರು : ಇಂದಿನಿಂದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ಎಸ್ ಐ ಟಿ ತಂಡ ತಮ್ಮ ತನಿಖೆಯನ್ನು ಆರಂಭಿಸಿವೆ. ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ಕೊಟ್ಟಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವಂತ ತಂಡವು, ವಶಕ್ಕೆ ಪಡೆದು, ವಿಚಾರಣೆ ಶುರುಮಾಡಿದೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್ ಐ ಟಿ ತನಿಖೆಗೆ ಆದೇಶಿತ್ತು. ಇಂತಹ ತನಿಖೆಯ ನೇತೃತ್ವವವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ತಂಡಕ್ಕೆ ವಹಿಸಿತ್ತು. ಇಂದಿನಿಂದ ತನಿಖೆ ಆರಂಭಿಸಿರುವಂತ ಎಸ್ ಐ ಟಿ ಅಧಿಕಾರಿಗಳು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ನೀಡಿದಂತ ಯಶವಂತಪುರದಲ್ಲಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ. ಹೀಗಾಗಿ ಎಸ್ ಐಟಿ ತನಿಖೆ ಈಗ ಕುತೂಹಲ ಮೂಡಿಸಿದೆ.
- Advertisement -