Friday, March 29, 2024
HomeUncategorizedಮಂಗಳೂರಿನಲ್ಲಿ ಹುಲಿವೇಷಧಾರಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಲೈಂಗಿಕ ಸಂಪರ್ಕ ಬೆಳೆಸಿ ಹಣ ನೀಡದ್ದಕ್ಕೆ ಕೊಲೆಗೈದ ಯುವಕ

ಮಂಗಳೂರಿನಲ್ಲಿ ಹುಲಿವೇಷಧಾರಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಲೈಂಗಿಕ ಸಂಪರ್ಕ ಬೆಳೆಸಿ ಹಣ ನೀಡದ್ದಕ್ಕೆ ಕೊಲೆಗೈದ ಯುವಕ

spot_img
- Advertisement -
- Advertisement -

ಮಂಗಳೂರಿನಲ್ಲಿ ಹುಲಿವೇಷಧಾರಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಕುಂಜತ್ತಬೈಲು ದೇವಿನಗರದ ರಾಜೇಶ್ ಪೂಜಾರಿ (31) ಎಂಬಾತನನ್ನು ಬಂಧಿಸಿದ್ದು ಈ ವೇಳೆ ಅಸಲೀಯತ್ತು ಬಹಿರಂಗವಾಗಿದೆ. ಸಲಿಂಗಕಾಮವೇ ಕೊಲೆಗೆ ಕಾರಣ ಎನ್ನಲಾಗಿದೆ.

ಬಂಧಿತ ಆರೋಪಿ ರಾಜೇಶ್ ಪೂಜಾರಿ ನಗರದ ಲಾಲ್​ಬಾಗ್​ನಲ್ಲಿರುವ ಬಾರ್​ನಲ್ಲಿ ಕೆಲಸಗಾರನಾಗಿದ್ದ. ಈತನನ್ನು ವೃದ್ಧ ಜಯಾನಂದ ಆಚಾರ್ಯ ಸಲಿಂಗಕಾಮದ ಉದ್ದೇಶಕ್ಕೆಂದು ಅಕ್ಟೋಬರ್​ 7, 8 ರಂದು ಬಳಸಿಕೊಂಡಿದ್ದರು. ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದರಂತೆ.ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!