- Advertisement -
- Advertisement -
ಉಡುಪಿಯ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೋರ್ಟ್ ನಲ್ಲಿ ವಿದ್ಯಾರ್ಥಿನಿ ಉಲ್ಟಾ ಹೊಡೆದಿದ್ದು ಪೋಷಕರು ಕಂಗಾಲಾಗಿದ್ದಾರೆ.
ಉಡುಪಿಯಲ್ಲಿ ಕ್ರಿಶ್ಚಿಯನ್ ಹುಡುಗಿಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಕೆಯ ಪೋಷಕರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಿನ್ನೆ ನಡೆದಿದ್ದು ಹುಡುಗಿ ಮತ್ತು ಅಕ್ರಮ್ ತಮ್ಮ ವಕೀಲರ ಮುಖೇನ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದ್ದಾಳೆ.
ವಿಚಾರಣೆಯ ಸಂದರ್ಭ ವಿದ್ಯಾರ್ಥಿನಿ ಜೀನ ಮೆರಿಲ್ ನ್ಯಾಯಧೀಶರ ಬಳಿ ನನ್ನನ್ನು ಯಾರೂ ಕೂಡಾ ಅಪಹರಿಸಿಲ್ಲ. ನನ್ನ ಸ್ವಂತ ನಿರ್ಧಾರದಿಂದ ಅಕ್ರಮ್ ಜೊತೆ ಹೋಗಿದ್ದೇನೆ ಎಂದು ತಿಳಿಸಿದ್ದಾಳೆ. ಇನ್ನು ತಾಯಿಯು ಮಗಳನ್ನು ತಮ್ಮ ಜೊತೆ ಕಳುಹಿಸಿ ಕೊಡುವಂತೆ ನ್ಯಾಯಾಧೀಶರಲ್ಲಿ ಕೇಳಿಕೊಂಡಾಗ ಹುಡುಗಿ ಒಪ್ಪಿಕೊಂಡಿಲ್ಲ. ಏಪ್ರಿಲ್ ಹತ್ತೊಂಭತ್ತರಂದು ಆತನೊಂದಿಗೆ ರಿಜಿಸ್ಟರ್ ಮ್ಯಾರೇಜ್ ಆಗಿ ನಂತರ ತಾಯಿಯನ್ನು ಭೇಟಿಯಾಗುವುದಾಗಿ ತಿಳಿಸಿದ್ದಾಳೆ. ಮುಂದಿನ ವಿಚಾರಣೆಯನ್ನು ಎಪ್ರಿಲ್ 22ಕ್ಕೆ ಮುಂದೂಡಲಾಗಿದೆ.
- Advertisement -