- Advertisement -
- Advertisement -
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಪುದುವೆಟ್ಟುವಿನಲ್ಲಿ ನಡೆದಿದೆ. ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಝೀಝ್(55) ಮುಹಮ್ಮದ್ ರಫೀಕ್ (39) ಬಂಧಿತರು. ಮತ್ತೊಬ್ಬ ಆರೋಪಿ ಅನ್ವರ್ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರು ಕರುಗಳು ಹಾಗೂ ಮೂರು ದನಗಳನ್ನು ರಕ್ಷಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -