- Advertisement -
- Advertisement -
ಉಳ್ಳಾಲ: ಮರಳು ಸಾಗಾಟ ಮಾಡುವ ಉದ್ದೇಶದಿಂದ ಅಕ್ರಮ ಮರಳುಗಾರಿಕೆ ಕಣ್ಗಾವಲಿಗೆ ಜಿಲ್ಲಾಡಳಿತ ಹಾಕಿದ್ದ ಸಿಸಿ ಕ್ಯಾಮೆರಾ ಕೆಡವಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಬಂಧಿತರು. ಇವರು ಎರಡು ದಿನಗಳ ಹಿಂದೆ ಸಿಸಿ ಕ್ಯಾಮೆರಾಗೆ ಹಾನಿ ಮಾಡಿದ್ದು, ಗ್ರಾಮ ಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಉಳ್ಳಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
- Advertisement -