- Advertisement -
- Advertisement -
ಮಂಗಳೂರು; ವಿದ್ಯುತ್ ತಂತಿ ತಗುಲಿ ಉಪ್ಪಿನಂಗಡಿ ಮೂಲದ ಆಟೋ ಚಾಲಕ ಸೇರಿದಂತೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ಮಂಗಳೂರಿನ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
![](https://mahaxpress.com/wp-content/uploads/2024/06/WhatsApp-Image-2024-06-27-at-09.55.37-1-1024x451.jpeg)
ರಾಜು ಮತ್ತು ದೇವರಾಜು ಮೃತ ಚಾಲಕರು. ಒಬ್ಬರು ಉಪ್ಪಿನಂಗಡಿ ಹಾಗೂ ಇನ್ನೊಬ್ಬರು ಸಕಲೇಶಪುರದವರು ಎನ್ನಲಾಗಿದೆ. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.
![](https://mahaxpress.com/wp-content/uploads/2024/06/WhatsApp-Image-2024-06-27-at-09.55.37-2-1024x575.jpeg)
ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಅವರೂ ವಿದ್ಯುತ್ ಶಾಕ್ ಗೆ ಒಳಗಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
- Advertisement -