- Advertisement -
- Advertisement -
ಮಂಗಳೂರು: ಮಧ್ಯ ವಯಸ್ಸಿನ ಇಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಪಣಂಬೂರು ಬೀಚ್ನಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತಿಸಲಾಗಿದೆ.
ಬೆಂಗಳೂರು ಮೂಲದವರಾಗಿದ್ದಾರೆ, ಮೊನ್ನೆ ಬೆಂಗಳೂರಿನಿಂದ ಆಗಮಿಸಿದದ್ದ ಈ ಜೋಡಿ ಇಂದು ಮುಂಜಾನೆ 5 ಗಂಟೆ ಸುಆರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದಾರೆ. ಸಮುದ್ರಕ್ಕೆ ಹಾರುವ ಮುಂಚೆ ತಮ್ಮ ಮೊಬೈಲ್ ಮತ್ತಿತರ ಸೊತ್ತುಗಳನ್ನು ತೀರದಲ್ಲೇ ಬಿಟ್ಟಿದ್ದರಿಂದ ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.
ಇಬ್ಬರ ಶವಗಳನ್ನು ಸ್ಥಳೀಯರ ಸಹಕಾರದಿಂದ ಮೇಲೆತ್ತಿ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಪಣಂಬೂರು ಪೊಲೀಸರು ಈ ಬಗ್ಗೆ ತನಿಖೆ ನಡಸುತ್ತಿದ್ದಾರೆ
- Advertisement -