- Advertisement -
- Advertisement -
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಕೊರೊನಾಗೆ ಇದೀಗ ಮತ್ತಿಬ್ಬರು ಬಲಿಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಂಕಿತರ ಸಾವಿನ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ಡಯಾಬಿಟೀಸ್ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಮಂಗಳೂರಿನ ಬೆಂಗ್ರೆ ನಿವಾಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಲ್ಲಿ ಕೊರೊನಾ ಸೋಂಕು ಕೂಡ ಕಾಣಿಸಿಕೊಂಡಿತ್ತು.ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮತ್ತೊರ್ವ 31 ವರ್ಷದ ಭಟ್ಕಳದ ಯುವಕನನ್ನು ಕೂಡ ಕೊರೊನಾ ಬಲಿ ಪಡೆದುಕೊಂಡಿದೆ.
- Advertisement -