ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ಸಂಭವಿಸಿದೆ.
ಬೋರ್ ವೆಲ್ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕುಣಿಗಲ್ ತಾಲೂಕಿನ ಚಿಗಣಿ ಪಾಳ್ಯ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಬೆಳಗ್ಗಿನ ಜಾವ ಅಪಘಾತ ನಡೆದಿದೆ. ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿಗಳಾಗಿದ್ದು, ಕಿಶನ್ ಶೆಟ್ಟಿ ಮತ್ತು ಫಿಲಿಪ್ ಮೇರಿ ಲೋಬೋ ಮೃತಪಟ್ಟಿದ್ದು, ಗಾಯಗೊಂಡಿರುವ ಪ್ರೀತಿ ಲೋಬೋ, ನಿತೀಶ್ ಪೂಜಾರಿ ಮತ್ತು ಹರೀಶ್ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಕಂಬಳ ವೀಕ್ಷಿಸಿ ಬಂಟ್ವಾಳಕ್ಕೆ ವಾಪಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.