Saturday, June 28, 2025
Homeಕೊಡಗುಕರಿಮೆಣಸು ಕೊಯ್ಯುವಾಗ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

ಕರಿಮೆಣಸು ಕೊಯ್ಯುವಾಗ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

spot_img
- Advertisement -
- Advertisement -

ಮಡಿಕೇರಿ : ತೋಟದಲ್ಲಿ ಕರಿಮೆಣಸು ಕೊಯ್ಯುವಾಗ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಂತಿ ತಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ (31) ಹಾಗೂ ಹುದಿಕೇರಿ ಹೋಬಳಿಯ ಹೈಸೊಡ್ಲೂರು ಗ್ರಾಮದಲ್ಲಿ ಕಾರ್ಮಿಕ ಇಸ್ಮಾಯಿಲ್ ಹುಸೇನ್ (33) ಮೃತಪಟ್ಟಿದ್ದಾರೆ.

ಕಾರ್ಮಿಕ ಹುಸೇನ್ ಹೈಸೊಡ್ಲೂರು ಗ್ರಾಮದಲ್ಲಿ ಕರಿಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟರೆ, ಅಬ್ರುದ್ದೀನ್ ನಾಲ್ಕೇರಿ ಗ್ರಾಮದ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!