Friday, June 27, 2025
Homeಕರಾವಳಿಉಡುಪಿಉಡುಪಿ: ಮೀನು‌ ಹಿಡಿಯಲು ಹೋಗಿ ಇಬ್ಬರು ಸಾವು

ಉಡುಪಿ: ಮೀನು‌ ಹಿಡಿಯಲು ಹೋಗಿ ಇಬ್ಬರು ಸಾವು

spot_img
- Advertisement -
- Advertisement -

ಉಡುಪಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ಈ ಅವಘಡ ಸಂಭವಿಸಿದೆ.ಮುಡ್ಡಾಯಿಗುಡ್ಡೆಯ ಹರೀಶ್ ಪೂಜಾರಿ (48) ಮತ್ತು ಹೃತೇಶ್ ಪೂಜಾರಿ (18) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದ ವೇಳೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

- Advertisement -
spot_img

Latest News

error: Content is protected !!